ಅನಂತಪುರ (ಆಂಧ್ರ ಪ್ರದೇಶ): ಅನಂತಪುರದಲ್ಲಿ ವಿಂಡ್ ಟರ್ಬೈನ್ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕನೋರ್ವ ಆಯತಪ್ಪಿ ಬಿದ್ದು, ಪ್ರಾಣಾಪಾಯದಲ್ಲಿ ಸಿಲುಕಿಕೊಂಡಿದ್ದರು. ಆದ್ರೆ ಅದೃಷ್ಟವಶಾತ್ ಸಹೋದ್ಯೋಗಿಗಳು ಮತ್ತು ಸ್ಥಳೀಯರ ಸಮಯಪ್ರಜ್ಞೆಯಿಂದ ಕಾರ್ಮಿಕನ ಜೀವ ಉಳಿದಿದೆ.
ಅಪಾಯಕ್ಕೆ ಸಿಲುಕಿದ್ದ ಸಿಬ್ಬಂದಿ: ಸುಂದರೇಶ್ ವಿಂಡ್ ಟರ್ಬೈನ್ ಏರಿ ಅದರ ನಿರ್ವಹಣೆಯ ಕೆಲಸ ಮಾಡುತ್ತಿದ್ದಾಗ ಅಚಾನಕ್ ಆಗಿ ಬೃಹತ್ ಗಾತ್ರದ ಕಂಬದಿಂದ ಜಾರಿದ್ದಾರೆ. ಆಗ ಅವರಿಗೆ ಕಟ್ಟಿದ್ದ ರೋಪ್ನಲ್ಲಿ ಗಾಳಿಯಲ್ಲಿ ತೇಲಾಡುತ್ತ ಅಪಾಯಕ್ಕೆ ಸಿಲುಕಿದ್ದರು.
ತಕ್ಷಣಕ್ಕೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ: ಈ ಕಾರ್ಮಿಕನೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಗಳು ಈ ದೃಶ್ಯವನ್ನು ಕಂಡು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯು ಕಾರ್ಮಿಕನನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಕೂಡಲೇ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ರವಾನಿಸಿದರು. ಕಾರ್ಮಿಕನ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ: ಹಾವು ಕಡಿತ ತಪ್ಪಿಸಲು ಸೇಫ್ಟಿ ಸ್ಟಿಕ್ ಆವಿಷ್ಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿಗಳು: ಇದರಿಂದ ಹೇಗೆ ರಕ್ಷಣೆ ಸಾಧ್ಯ?